close
Choose your channels

ಬೆಟ್ಟದ ಮೇಲೆ ಬೆಳ್ಳಿ ಹಾಡು

Thursday, May 15, 2014 • Kannada Comments
Listen to article
--:-- / --:--
1x
This is a beta feature and we would love to hear your feedback?
Send us your feedback to audioarticles@vaarta.com

ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗೆ ಅಂಜಿದರೆ ಎಂತಯ್ಯ... ಇದು ಜನಪ್ರಿಯ ಹಾಡು. ಆದರೆ ಇದೆ ಹಾಡನ್ನು ಏನು ‘ಬೆಳ್ಳಿ’ ಚಿತ್ರಕ್ಕೆ ಉಪಯೋಗಿಸುತ್ತಿಲ್ಲ ಆದರೆ ಬೆಟ್ಟದ ಮೇಲೆ ಮಾತ್ರ ಚಿತ್ರೀಕರಣ ಇಟ್ಟುಕೊಂಡಿದ್ದಾರೆ.

ಯಶಸ್ವಿನಿ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರು ನಿರ್ಮಿಸುತ್ತಿರುವ ‘ಬೆಳ್ಳಿ ‘ಚಿತ್ರದ ಹಾಡೊಂದರ ಚಿತ್ರೀಕರಣ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಶಿವರಾಜಕುಮಾರ್, ವಿನೋದ್ಪ್ರಭಾಕರ್, ದೀಪಕ್, ಪ್ರಶಾಂತ್ ಹಾಗೂ ವೆಂಕಟೇಶ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಶ್ರೀಧರ್ ಸಂಗೀತ ನೀಡುತ್ತಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕೃತಿ ಖರಬಂದ, ವಿನೋದ್ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ, ಶ್ರೀನಿವಾಸಮೂರ್ತಿ, ರಮೇಶ್ಭಟ್, ನಾಗರಾಜ್, ಹರೀಶ್ ರೈ, ಲೋಕಿ, ನೀನಾಸಂ ಮಂಜು, ಭಾಸ್ಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರವಿಂದ್ರಾವ್ ಕಾರ್ಯಕಾರಿ ನಿರ್ಮಾಪಕರಾಗಿರುವ‘ಬೆಳ್ಳಿ ‘ಚಿತ್ರಕ್ಕೆ ಕೆ.ಜೆ.ರಾಜಶೇಖರ್ ಸಹ ನಿರ್ಮಾಪಕರಾಗಿದ್ದಾರೆ.

Follow us on Google News and stay updated with the latest!